ರಾಜ್ಯದಲ್ಲಿ ತಾನೊಬ್ಬನೇ ಮಾಸ್ ಲೀಡರ್ ಎಂಬ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ವಿ.ಸೋಮಣ್ಣ

Prasthutha|

ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ತಾನೊಬ್ಬನೇ ಮಾಸ್ ಲೀಡರ್ ಭ್ರಮೆಯಲ್ಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೈಸೂರಿನಲ್ಲಿ ಯಾರ ಹೆಸರಲ್ಲಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದು ಗೊತ್ತು. ಕಾಲ ಬಂದಾಗ ಎಲ್ಲವನ್ನು ಬಿಚ್ಚಿಡುತ್ತೇನೆ ಎಂದು ಹೇಳಿದರು.


ರಾಜಕೀಯದಲ್ಲಿ ಸಿದ್ದರಾಮಯ್ಯ ಅವರಷ್ಟೇ ಸರ್ವೀಸ್ ನನಗೂ ಆಗಿದೆ. ಆದರೆ ಅವರು ಕೆಲವು ನಾಯಿ- ನರಿಗಳ ಜತೆ ಸೇರಿ ನನ್ನ ವಿರುದ್ಧ ಬಾಯಿಗೆ ಬಂದಂತೆ ತಮ್ಮ ಘನತೆ- ಗೌರವ ಮೀರಿ ಮಾತನಾಡಿದ್ದಾರೆ. ಯಾರದೋ ಮಾತು ಕೇಳಿ ನನ್ನ ಮೇಲೆ ಪರ್ಸೆಂಟೇಜ್ ಆರೋಪ ಮಾಡಿರುವುದು ನೋವು ಉಂಟು ಮಾಡಿದೆ ಎಂದು ಹೇಳಿದರು.

Join Whatsapp