ಸಿದ್ದರಾಮಯ್ಯ-ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು: ಸಿ.ಟಿ.ರವಿ

Prasthutha|

ಚಿಕ್ಕಮಗಳೂರು : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ. ಸುಳ್ಳು ಹೇಳುವುದರಲ್ಲಿ ಅವರಂತಹಾ ನಿಷ್ಣಾತರು ಬೇರೆ ಯಾರೂ ಇಲ್ಲ. ಸುಳ್ಳಿಗೆ ಪ್ರಶಸ್ತಿ ನೀಡುವುದಾದರೆ ಸಿದ್ದರಾಮಯ್ಯ ಬಿಟ್ಟು ಬೇರ್ಯಾರಿಗೂ ಸಿಗಲ್ಲ ಎಂದು ವ್ಯಂಗ್ಯವಾಡಿದರು.

ಮೋದಿ, ಫ್ಲಡ್‍ನಲ್ಲಿ ಬರಲಿಲ್ಲ, ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ ಬಂದಿದ್ದಾರೆ ಎಂಬ ಸಿದ್ದರಾಮಯ್ಯ ಅವರ  ಹೇಳಿಕೆಯನ್ನು ಉಲ್ಲೇಖಿಸಿದ ಶಾಸಕ ಸಿ.ಟಿ.ರವಿ, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿದ್ರು, ಆಕ್ಸಿಜನ್ ಪ್ಲಾಂಟ್ ಹಾಕಿದ್ರಾ. ಪಿಎಂ ಕೇರ್ ಫಂಡ್ ನಿಂದ ಪ್ರತಿ ಆಸ್ಪತ್ರೆಗೂ ಆಕ್ಸಿಜನ್ ಪ್ಲಾಂಟ್ ಹಾಕಲಾಗಿದೆ. 9 ತಿಂಗಳಲ್ಲಿ ಎಲ್ಲರಿಗೂ ಎರಡು ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಸಿದ್ದು ಹಾಕಿಸಿಕೊಂಡಿಲ್ವಾ…? ಆ ಡೋಸೇಜ್ ಇರದಿದ್ದಿದ್ರೆ, ಸಿದ್ದುಗೆ ಸಿಗದಿದ್ದಿದ್ರೆ ಏನಾಗ್ತಿತ್ತು ಎಂದು ಊಹೆ ಮಾಡಿಕೊಳ್ಳಲಿ ಎಂದು ಆಕ್ರೋಶಗೊಂಡರು.



Join Whatsapp