ಇದು ನರಹಂತಕ ಸರಕಾರ; ಯಡಿಯೂರಪ್ಪ ದೇಶ ಕಂಡ ಅಸಮರ್ಥ ಮುಖ್ಯಮಂತ್ರಿ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಜನರ ಮೇಲೆ ಕಾಳಜಿ ಇಲ್ಲದ ರಾಜ್ಯ ಮತ್ತು ಕೇಂದ್ರ ಸರಕಾರ ನರಂಹತಕ ಸರಕಾರ ಎಂದು ಮಾಜಿ ಮುಖ್ಯಮಂತ್ರಿ,‌ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಯಡಿಯೂರಪ್ಪ ದೇಶ ಕಂಡ ಅಸಮರ್ಥ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನ ಕೋವಿಡ್ ಮಕ್ಕಳ ಆರೋಗ್ಯ ಕಿಟ್ ಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೋವಿಡ್ ನಿರ್ವಹಣೆಯಲ್ಲಿ ಸರಕಾರದ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸರಕಾರದ ಬೇಜವಾಬ್ದಾರಿತನದಿಂದ ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸರಕಾರ ಬಣ್ಣ ಬಣ್ಣದ ಮಾತುಗಳಿಂದ ಜನರನ್ನು ವಂಚಿಸುತ್ತಿದೆ. ಇಷ್ಟೊಂದು ನರಹಂತಕ ಸರಕಾರವನ್ನು ಇದುವರೆಗೆ ನಾನು ನೋಡಿಲ್ಲ. ಯಡಿಯೂರಪ್ಪರಂತಹ ಅಸಮರ್ಥ ಮುಖ್ಯಮಂತ್ರಿಯನ್ನು ಇದುವರೆಗೆ ನೋಡಿಲ್ಲ. ದೇಶದಲ್ಲಿ ಎಲ್ಲೂ ಯಡಿಯೂರಪ್ಪರಂತಹ ಮುಖ್ಯಮಂತ್ರಿ ಇಲ್ಲ. ಜನರ ರಕ್ಷಣೆ ಮಾಡಲು ಇವರಿಂದ ಸಾಧ್ಯವಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.‌

ಸರಕಾರದ ಬೇಜವಾಬ್ದಾರಿತನದಿಂದ ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಆಕ್ಸಿಜನ್ ಇಲ್ಲದೆ ಜನರು ಸತ್ತಿದ್ದಾರೆ. ಅವರಿಗೆ 2 ಲಕ್ಷ ಪರಿಹಾರ ಕೊಟ್ರೆ ಮುಗಿಯಿತಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದು, ರಾಜ್ಯ ಸರಕಾರದ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಎಮ್ ಎಲ್ ಸಿ ಹರಿಪ್ರಸಾದ್, ಮಹಿಳಾ ಕಾಂಗ್ರೆಸ್‌ನ ಡಾ.‌ಪುಷ್ಪಾ ಅಮರನಾಥ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮತ್ತಿತರರು ಉಪಸ್ಥಿತಿತರಿದ್ದರು.

Join Whatsapp