Home ಟಾಪ್ ಸುದ್ದಿಗಳು ಕಾರು ಹತ್ತುವಾಗ ಕಾಲು ಜಾರಿ ಬಿದ್ದ ಸಿದ್ದರಾಮಯ್ಯ

ಕಾರು ಹತ್ತುವಾಗ ಕಾಲು ಜಾರಿ ಬಿದ್ದ ಸಿದ್ದರಾಮಯ್ಯ

ವಿಜಯನಗರ: ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜನರತ್ತ ಕೈ ಬೀಸುತ್ತಲೇ ಕಾರಿನಿಂದ ಮುಗ್ಗರಿಸಿ ಬಿದ್ದ ಘಟನೆ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದಿದೆ.


ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ತೆರಳಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರು ಹತ್ತುವಾಗ ಕಾಲು ಜಾರಿತ್ತು. ಆದರೆ ತಕ್ಷಣವೇ ನೆರವಿಗೆ ಧಾವಿಸಿದ ಅಂಗರಕ್ಷಕ ಅವರನ್ನು ಹಿಡಿದುಕೊಂಡಿದ್ದಾರೆ.


ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ. ಶ್ರೀನಿವಾಸ್ ಪರ ಪಟ್ಟಣದಲ್ಲಿ ಪ್ರಚಾರ ಕೈಗೊಳ್ಳಲು ನಗರದ ಹೊರವಲಯದ ಹೆಲಿಪ್ಯಾಡ್ಗೆ ಬಂದಿಳಿದಿದ್ದ ಸಿದ್ದರಾಮಯ್ಯ ಅವರನ್ನು ನೋಡಲು ಹೆಲಿಪ್ಯಾಡ್ ಸುತ್ತ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಕಾರಿನ ಒಂದು ಬದಿಯಲ್ಲಿ ನಿಂತು ಜನರತ್ತ ಕೈಬೀಸಿದ ಬಳಿಕ ಕಾರೊಳಗೆ ಕುಳಿತುಕೊಳ್ಳುವಾಗ ಆಯತಪ್ಪಿದ ಸಿದ್ದರಾಮಯ್ಯ ಅವರನ್ನು ಹಿಡಿದ ಅಂಗರಕ್ಷಕ ಒಳಗೆ ಕೂರಿಸಿ ನೀರು ಕೊಟ್ಟು ಉಪಚರಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ. ನಿತ್ಯ ಅಡ್ಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದ ಕಾರಿನಲ್ಲಿ ಕಾಲು ಜಾರಿ ಹಿಂದಕ್ಕೆ ಮುಗ್ಗರಿಸಿದ್ದೆ. ಈಗ ಆರಾಮಾಗಿದ್ದೇನೆ. ಇದನ್ನು ಅತಿರಂಜಿತ ರೀತಿಯಲ್ಲಿ ವರದಿಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಮಾಧ್ಯಮದವರೊಂದಿಗೆ ವಿನಂತಿ ಮಾಡಿದ್ದಾರೆ.

Join Whatsapp
Exit mobile version