ರಾಜ್ಯ ರಾಜಕಾರಣದಲ್ಲೇ ಉಳಿಯುವೇ, ರಾಷ್ಟ್ರ ರಾಜಕಾರಣಕ್ಕೆ ಬರಲ್ಲ: ಸಿದ್ದರಾಮಯ್ಯ

Prasthutha|

ನವದೆಹಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿದ್ದಾರೆ. ಈ ವೇಳೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗುವಂತೆ ನನ್ನ ಬಳಿ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದರು. ಆದರೆ ನಾನು ತಿರಸ್ಕಾರ ಮಾಡಿದ್ದೇನೆ ಎಂದು ತಿಳಿಸಿದರು. ರಾಷ್ಟ್ರ ರಾಜಕಾರಣದಲ್ಲಿ ನನಗೆ ಯಾವುದೇ ರೀತಿಯ ಆಸಕ್ತಿ ಇಲ್ಲ. ಕರ್ನಾಟಕ ರಾಜಕೀಯದಲ್ಲಿ ಮಾತ್ರ ಉಳಿಯುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

- Advertisement -


ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಈ ಭೇಟಿ ವೇಳೆ ಕೇಳಿಲ್ಲ. ಆ ರೀತಿಯ ಸುದ್ದಿ ಹರಿದಾಡುತ್ತಿದ್ದು, ಅದು ಸುಳ್ಳು ಸುದ್ದಿ ಎಂದರು.

Join Whatsapp