ಸುಧಾಕರ್ ಮಾಡಿದ್ದು ಒಂದೇ ಕೆಲಸ, ಅದು ಲೂಟಿ ಮಾತ್ರ: ಸಿದ್ದರಾಮಯ್ಯ ವಾಗ್ದಾಳಿ

Prasthutha|

ಚಿಕ್ಕಬಳ್ಳಾಪುರ: ಆರೊಗ್ಯ ಸಚಿವ ಸುಧಾಕರ್ ಮಾಡಿದ್ದು ಒಂದೇ ಕೆಲಸ ಅದು ಲೂಟಿ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

- Advertisement -

ಚಿಕ್ಕಬಳ್ಳಾಪುರದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಎತ್ತಿನಹೊಳೆ ಯೋಜನೆ ಮತ್ತು ಹೆಚ್.ಎನ್.ವ್ಯಾಲಿ ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಇದೆಲ್ಲವನ್ನೂ ಬಿಜೆಪಿ ಮಾಡಿದ್ದು ಎಂದು ಸುಧಾಕರ್​ ಹೇಳುತ್ತಾನೆ. ಆದರೆ ಸುಧಾಕರ್ ಮಾಡಿದ್ದು ಒಂದೇ ಕೆಲಸ ಅದು ಲೂಟಿ ಮಾತ್ರ. ಕೆಲಸ ಮಾಡುವುದು ನಾವು ಆದರೆ ಕಮಿಷನ್ ಹೊಡೆದಿದ್ದು ಸುಧಾಕರ್ ಎಂದು ವಾಗ್ದಾಳಿ ನಡೆಸಿದರು.

ಸುಧಾಕರ್ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದ ನಂತರ ಪಕ್ಷ ತೊರೆದು ಕೇಸರಿ ಪಡೆ ಸೇರಿದವರು. ಡಾ.ಕೆ.ಸುಧಾಕರ್​ ಒಬ್ಬ ಫ್ರಾಡ್, ಅವರಿಗೆ ಟಿಕೆಟ್ ನೀಡಬೇಡಿ​ ಎಂದು ವೀರಪ್ಪ ಮೊಯ್ಲಿ ಹೇಳಿದ್ದರು. ಆದರೂ ನಾವು ಟಿಕೆಟ್ ನೀಡಿದ್ದೆವು. ಆದರೆ ಸುಧಾಕರ್​ಗೆ ಟಿಕೆಟ್​ ನೀಡಿದ್ದಕ್ಕೆ ಇಂದು ಪಶ್ಚಾತ್ತಾಪ ಪಡುತ್ತಿದ್ದೇವೆ, ನಾನು ಕೂಡ ಪಶ್ಚಾತ್ತಾಪ ಪಡುತ್ತಿದ್ದೇನೆ ಎಂದರು.

- Advertisement -

‘ಬಾಂಬೆಗೆ ಓಡಿಹೋದ ಸುಧಾಕರ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾನೆ’

ಆಪರೇಷನ್​ ಕಮಲಕ್ಕೆ ಬಲಿಯಾಗಿ ರಾತ್ರಿ 1 ಗಂಟೆ ಸುಮಾರಿಗೆ ಪ್ರಮಾಣ ಮಾಡಿ ಬೆಳಗ್ಗೆ ಬಾಂಬೆಗೆ ಓಡಿಹೋದ ಸುಧಾಕರ್ ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾನೆ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ನಮ್ಮ ಜೊತೆಯಲ್ಲೇ ಇದ್ದ. ಆಗ ಸುಮ್ಮನಿದ್ದು ಈಗ ಆರೋಪ ಮಾಡುತ್ತಿದ್ದಾನೆ ಈ ಆಸಾಮಿ ಎಂದು ಏಕವಚನದಲ್ಲೇ ಸುಧಾಕರ್ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದರು.

Join Whatsapp