ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಿ: ಸಿದ್ದರಾಮಯ್ಯ ಒತ್ತಾಯ

Prasthutha|

ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರ‌ದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ.‌ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಮುಖ್ಯಮಂತ್ರಿಯವರು ಬಳಸಿಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Join Whatsapp