ದಿನೇಶ್ ಕನ್ಯಾಡಿ ಮನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

Prasthutha|

ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತನಿಂದ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತ ಯುವಕ ದಿನೇಶ್ ಕನ್ಯಾಡಿ ಮನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ನೀಡಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊಲೆಯಾದ ದಿನೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ ರೂ. 25 ಲಕ್ಷ ಪರಿಹಾರ ನೀಡಬೇಕು, ಈ ವಿಚಾರವನ್ನು ಸದನದಲ್ಲಿ ಕೂಡ ಪ್ರಸ್ತಾಪ ಮಾಡುತ್ತೇನೆ. ದಿನೇಶ್ ಕುಟುಂಬದವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮೃತ ಕುಟುಂಬಕ್ಕೆ ವೈಯುಕ್ತಿಕವಾಗಿ ಸಿದ್ದರಾಮಯ್ಯ ಒಂದು ಲಕ್ಷ ರೂ. ನೀಡಿದರು.

Join Whatsapp