ಸಿದ್ದರಾಮಯ್ಯರನ್ನು ಒಂದು ನಟೋರಿಯಸ್ ಗ್ಯಾಂಗ್ ಖೆಡ್ಡಾಗೆ ಕೆಡವಿದೆ: ಸಿಟಿ ರವಿ

Prasthutha|

ಚಿಕ್ಕಮಗಳೂರು: ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮಾತ್ರ ಆರೋಪ ಮಾಡುತ್ತಿಲ್ಲ. ಒಂದು ನಟೋರಿಯಸ್ ಗ್ಯಾಂಗ್ ಸಿಎಂರನ್ನು ಬಳಸಿಕೊಂಡಿದೆ ಎಂದು ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಗರಣಗಳಿಗೆ ರಕ್ಷಣೆ ಇರಲಿ ಎಂದು ಸಿದ್ದರಾಮಯ್ಯರನ್ನು ನಟೋರಿಯಸ್ ಗ್ಯಾಂಗ್ ಖೆಡ್ಡಾಗೆ ಕೆಡವಿಕೊಂಡಿದೆ ಎಂದು ಹೇಳಿದ್ದಾರೆ.


ಎಷ್ಟು ಡಿನೋಟಿಫೈ ಮಾಡಿದ್ದಾರೆ, ಯಾವ ಕಾರಣಗಳಿಗೆ ಮಾಡಿದ್ದಾರೆ. ಯಾರ್ಯಾರಿಗೆ ಬದಲಿ ನಿವೇಶನ ಕೊಟ್ಟಿದ್ದಾರೆ ಎಲ್ಲವೂ ಹೊರಬರುತ್ತೆ. ಸೆಟ್ಲ್ ಮೆಂಟ್ ಡೀಡ್ ಅನ್ನುವುದೇ ಪ್ರಾಧಿಕಾರದಲ್ಲಿ ಇರುವುದಿಲ್ಲ. ಎಲ್ಲರೂ ದೊಡ್ಡ ದೊಡ್ಡ ಪ್ರಭಾವಿಗಳೇ ಇರೋದು. ನಮ್ಮ ಬಳಿ ಆರೋಪ ಸಾಬೀತು ಮಾಡುವ ಕೆಲ ದಾಖಲೆಗಳಿವೆ ಎಂದಿದ್ದಾರೆ.



Join Whatsapp