Home ಟಾಪ್ ಸುದ್ದಿಗಳು ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ಶ್ರೀರಾಮುಲು

ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ಶ್ರೀರಾಮುಲು

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಶಾಸಕರಾಗಿದ್ದಾಗ ವಿರೋಧ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಭ್ರಷ್ಟಾಚಾರ ನಡೆದಾಗ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕ್ರಮ ತೆಗೆದುಕೊಳ್ಳಬೇಕು ಎಂದು ಅವರೇ ಹೇಳುತ್ತಾರೆ. ಇದೀಗ ಅವರ ಮೇಲೆ ಭ್ರಷ್ಟಾಚಾರದ ಅರೋಪ ಬಂದಿದೆ. ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿಯೂ ಸಿದ್ದರಾಮಯ್ಯ ಹಿನ್ನಡೆಯಾಗಿದೆ. ಇದನ್ನರಿತು ರಾಜೀನಾಮೆ ನೀಡಬೇಕು. ಹಿಂದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಉನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡಬೇಕು ಎಂದರು.

Join Whatsapp
Exit mobile version