Home ಟಾಪ್ ಸುದ್ದಿಗಳು ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ: ಪ್ರಿಯಾಂಕ್ ಖರ್ಗೆ

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಡಾ ಸಂಬಂಧ ಏನೇ ತನಿಖೆ ನಡೆಯಲಿ ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಪರ ಸಚಿವ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್ ಮಾಡಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಬಳಿಕ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಹೈಕೋರ್ಟ್ ಸೂಕ್ಷ್ಮವಾಗಿ ತನಿಖೆಗೆ ಆದೇಶ ಮಾಡಿದೆ. 17ಎ ಅಡಿ ತನಿಖೆಗೆ ಅನುಮತಿ ಕೊಟ್ಡಿದೆ. ಕೋರ್ಟ್ 218 ಬಿಎನ್‌ ಎಸ್‌ ಎಸ್ ಅಡಿ ತಿರಸ್ಕಾರ ಮಾಡಿದೆ. ಸಿಎಂ ಕೂಡಾ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ನಾವೇ ಮೊದಲು ನ್ಯಾಯಾಂಗ ರಚನೆ ಮಾಡಿದ್ದೇವೆ. ನಾವು ತನಿಖೆಯಿಂದ ಹಿಂದೆ ಸರಿಯಲ್ಲ. ತನಿಖೆ ಆಗಲಿ ಎಂದು ತಿಳಿಸಿದರು.

ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ. ಬಿಜೆಪಿಗೆ ರಾಜ್ಯಪಾಲರು ಸ್ಟೇಷನ್ ಹೌಸ್ ಆಗಿದ್ದಾರೆ. ರಾಜ್ಯಪಾಲರು ಕಾನೂನು ಪ್ರಕಾರ ಆದೇಶ ಕೊಡಬೇಕು. ಆದರೆ ಅದನ್ನು ಮಾಡಿಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.

Join Whatsapp
Exit mobile version