ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್ ಡಿಕೆ ಆರೋಪ

Prasthutha|

ಬೆಂಗಳೂರು: ಮುಡಾ ಸೈಟ್ ಪ್ರಕರಣದ ಸುದ್ದಿ ಜೋರಾಗುತ್ತಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಮೇಲೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

- Advertisement -


ಮೈಸೂರಿನಲ್ಲಿ ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗವನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅ ಜಾಗದಲ್ಲಿ ಡಿಸಿಎಂ ಆಗಿದ್ದಾಗ ಮನೆ ಕಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಮೇಲೆ ನೇರ ಆರೋಪ ಮಾಡಿದ್ದಾರೆ.


ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 15 ಸೈಟ್ ಅಕ್ರಮವಾಗಿ ಪಡೆದ ಪ್ರಕರಣ ಒಂದು ಕಡೆಯಾದರೆ ಇದು ಇನ್ನೊಂದು ಅಕ್ರಮ. ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಪ್ರಶ್ನಿಸಿದರು.

- Advertisement -


ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್ ಮಾತ್ರ ಅಲ್ಲ. ಮೈಸೂರಿನಲ್ಲಿ ಸೀರಿಸ್ ಆಫ್ ಅಕ್ರಮ ಕೇಸ್ ಸಿದ್ದರಾಮಯ್ಯರದ್ದು ಇದೆ ಅಂತ ಆರೋಪ ಮಾಡಿದರು.



Join Whatsapp