ಕರ್ನಾಟಕ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

Prasthutha|

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸುವುದರ ವಿರುದ್ಧ ಕನ್ನಡಿಗರಿಂದ ಆಕ್ರೋಶ ವ್ಯಕ್ತವಾಗುತ್ತಿರುವುದರ ಮಧ್ಯೆ ಸಿಎಂ ಸಿದ್ಧರಾಮಯ್ಯ, ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೋರಿ ಕೇಂದ್ರ ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದಾರೆ.

- Advertisement -

ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದ ಸಿಎಂ, ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಪರೇಡ್ ನಲ್ಲಿ ಕರ್ನಾಟಕ ರಾಜ್ಯದ ಸ್ತಬ್ಧ ಚಿತ್ರವನ್ನು ಅಳವಡಿಸದೇ ಇರೋ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇನ್ನೂ ರಾಜ್ಯದ ಏಳು ಕೋಟಿ ಕನ್ನಡಿಗರ ಭಾವನಾತ್ಮಕ ವಿಷಯವು ಸ್ತಬ್ಧ ಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸೋದಾಗಿದೆ. ಕರ್ನಾಟಕದ ಸ್ತಬ್ಧ ಚಿತ್ರವನ್ನು ಪರೇಡ್ ನಲ್ಲಿ ನಿರಾಕರಿಸುವುದು ಕೇವಲ ಪ್ರಮಾದವಲ್ಲ, ಇದು ನಮ್ಮ ರಾಜ್ಯದ ಹೆಮ್ಮಗೆ ಧಕ್ಕೆಯಾದಂತೆ ಆಗಿದೆ ಎಂದು ಸಿಎಂ ಪತ್ರದಲ್ಲಿ ವಿವರಿಸಿದ್ದಾರೆ.

- Advertisement -

ಈ ಬಗ್ಗೆ Xನಲ್ಲಿ ಪೋಸ್ಡ್ ಮಾಡಿರುವ ಸಿಎಂ ಸಿದ್ಧರಾಮಯ್ಯ, ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸುವಂತೆ ಕೋರಿ ನಾನು ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ನಾನು 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಮೇಲ್ವಿಚಾರಣೆಯಲ್ಲ. ಇದು ನಮ್ಮ ರಾಜ್ಯದ ಹೆಮ್ಮೆಗೆ ಹೊಡೆತ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ ಎಂದು ತಿಳಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

Join Whatsapp