ದಕ್ಷಿಣ ಕನ್ನಡ: ಗೋಡ್ಸೆ ಅನುಯಾಯಿಗಳಿಂದ ಸಮಾಜದ ಸಾಮರಸ್ಯ ಹಾಳಾಗುತ್ತಿದೆ; ಸಂಘ ಪರಿವಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Prasthutha|

ಬಂಟ್ವಾಳ :ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚುವ ಬಿಜೆಪಿಯವರ ಬಗ್ಗೆ ಜಾಗರೂಕರಾಗಿರಬೇಕು. ಸಮಾಜ ಸಾಮರಸ್ಯದಿಂದ ಇರಬೇಕಾದರೆ ಬಿಜೆಪಿಯನ್ನು ಕಿತ್ತೊಗೆಯಬೇಕು ಎಂದು ಮಾಜಿ ಸಿಎಂ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

- Advertisement -

ಬಂಟ್ವಾಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ದೊಡ್ಡ ಸುಳ್ಳುಗಾರ. ಹಾಗೆಯೇ ಬಿಜೆಪಿ ಕೋಮುವಾದಿ ಪಕ್ಷ ಎಂದು ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ 144 ಸೆಕ್ಷನ್ ಉಲ್ಲಂಘಿಸಿ ಮೆರವಣಿಗೆ ಮಾಡಿದ ಸಚಿವ ಈಶ್ವರಪ್ಪ ಒಬ್ಬ ಪೆದ್ದ, ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣ ಹಚ್ಚುವ ಬಿಜೆಪಿಯವರ ಬಗ್ಗೆ ಜಾಗರೂಕರಾಗಿರಬೇಕು ಎಂದು ಕರೆ ನೀಡಿದರು.

ಶಿವಮೊಗ್ಗದಲ್ಲಿ ಮೃತ ವ್ಯಕ್ತಿಗೆ ರೂ. 25 ಲಕ್ಷ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ದಲಿತ ಯುವಕ ಮೃತಪಟ್ಟಿದ್ದಕ್ಕೆ, ನರಗುಂದದಲ್ಲಿ ಮುಸ್ಲಿಂ ಮೃತಪಟ್ಟಿದ್ದಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. ಬಿಜೆಪಿ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚಿದ್ದಾರೆ ಎಂದು ಕಿಡಿಕಾರಿದರು. ಜಾತಿ ಬಿಟ್ಟು ಮನುಷ್ಯರಾಗಿ ಬದುಕಿ, ಮಹಾತ್ಮಾ ಗಾಂಧೀಜಿಯವರು ನಮಗೆಲ್ಲರಿಗೂ ಮಾರ್ಗದರ್ಶಕರು. ಗಾಂಧೀಜಿಯವರನ್ನು ಕೊಂದ ಗೋಡ್ಸೆ ವಂಶಸ್ಥರು ಇಂದು ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಸಂಘ ಪರಿವಾರದ ವಿರುದ್ಧ ಕಿಡಿಕಾರಿದರು.

Join Whatsapp