ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ: ಸಿದ್ದರಾಮಯ್ಯ

Prasthutha|

- Advertisement -

ಮೈಸೂರು: ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ಟಿ.ನರಸಿಪುರದಲ್ಲಿ ಸಾರ್ವಜನಿಕರನ್ನದ್ದೇಶಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ‘ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಮನೆಯಲ್ಲಿ ಪೂಜೆ ಮಾಡುವುದಿಲ್ಲ ಹಾಗಂತ ದೇವರು ಇಲ್ಲ ಎಂದಲ್ಲ, ನಿಜವಾಗಿಯೂ ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ. ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಅವರು ಪೂಜೆ ನಡೆಸುವ ಸಮಯದಲ್ಲಿ ಮಂತ್ರ ಹೇಳುತ್ತಲೇ ಏನೆನೋ ಆಸೆ ಪಡುತ್ತಿರುತ್ತಾರೆ’ ಎಂದು ಅವರು ಹೇಳಿದ್ದಾರೆ.

Join Whatsapp