ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ : ಸಿದ್ದರಾಮಯ್ಯ

Prasthutha|

ಮೈಸೂರು : ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ. ನನಗೆ ಆರೆಸ್ಸೆಸ್ ಮೂಲಗಳಿಂದ ಮಾಹಿತಿಯಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಯಡಿಯೂರಪ್ಪ ಮುಂದುವರಿಯುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇನ್ನೇನು ಬಂದು ತೆಗೆಯುತ್ತೇನೆ ಎಂದು ಹೇಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.

ಯಾವುದೇ ಪಾರ್ಟಿಯ ಹೈಕಮಾಂಡ್ ಆದರೂ ತೆಗೆಯುತ್ತೇನೆಂದು ಹೇಳುವುದಿಲ್ಲ. ಹೈಕಮಾಂಡ್ ತೆಗೆಯುತ್ತೇನೆಂದರೆ ಸರ್ಕಾರ ನಡೆಯುತ್ತದೆಯೇ? ಕೆಲಸ ಮಾಡಲು ಆಗುತ್ತದೆಯೇ? ಎಂದು ಅವರು ಕೇಳಿದ್ದಾರೆ.

- Advertisement -

ಅವರು ಆ ರೀತಿ ಹೇಳಬಹುದು, ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರೆಸ್ಸೆಸ್ ಮೂಲಗಳಿಂದ ಮಾಹಿತಿಯಿದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಕೆಳಗಿಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ವಿರುದ್ಧದ ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ಮಾತನಾಡಿದ ಅವರು ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ ಯಾರಿಗೆ ಗೊತ್ತು? ಅದೂ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ!, ಅದು ಗೊತ್ತಾಗಬೇಕಲ್ವ? ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

Join Whatsapp