Home ಟಾಪ್ ಸುದ್ದಿಗಳು ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ : ಸಿದ್ದರಾಮಯ್ಯ

ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ : ಸಿದ್ದರಾಮಯ್ಯ

ಮೈಸೂರು : ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ. ನನಗೆ ಆರೆಸ್ಸೆಸ್ ಮೂಲಗಳಿಂದ ಮಾಹಿತಿಯಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಯಡಿಯೂರಪ್ಪ ಮುಂದುವರಿಯುತ್ತಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇನ್ನೇನು ಬಂದು ತೆಗೆಯುತ್ತೇನೆ ಎಂದು ಹೇಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.

ಯಾವುದೇ ಪಾರ್ಟಿಯ ಹೈಕಮಾಂಡ್ ಆದರೂ ತೆಗೆಯುತ್ತೇನೆಂದು ಹೇಳುವುದಿಲ್ಲ. ಹೈಕಮಾಂಡ್ ತೆಗೆಯುತ್ತೇನೆಂದರೆ ಸರ್ಕಾರ ನಡೆಯುತ್ತದೆಯೇ? ಕೆಲಸ ಮಾಡಲು ಆಗುತ್ತದೆಯೇ? ಎಂದು ಅವರು ಕೇಳಿದ್ದಾರೆ.

ಅವರು ಆ ರೀತಿ ಹೇಳಬಹುದು, ಆದರೆ ನನಗಿರುವ ಮಾಹಿತಿ ಬೇರೆ. ನನಗೆ ಆರೆಸ್ಸೆಸ್ ಮೂಲಗಳಿಂದ ಮಾಹಿತಿಯಿದೆ. ಸಿಎಂ ಯಡಿಯೂರಪ್ಪ ಅವರನ್ನು ಏಪ್ರಿಲ್ ನಂತರ ಕೆಳಗಿಳಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ವಿರುದ್ಧದ ಸಿಡಿ ಬ್ಲಾಕ್ ಮೇಲ್ ವಿಚಾರವಾಗಿ ಮಾತನಾಡಿದ ಅವರು ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನು ಮಾಡಿದ್ದಾನೋ ಯಾರಿಗೆ ಗೊತ್ತು? ಅದೂ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ!, ಅದು ಗೊತ್ತಾಗಬೇಕಲ್ವ? ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು.

Join Whatsapp
Exit mobile version