ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ತೊರೆದಿರುವುದರಿಂದ ಪಕ್ಷಕ್ಕೆ ಹಾನಿಯಾಗಲ್ಲ: ಸಿದ್ದರಾಮಯ್ಯ

Prasthutha|

ಕಲಬುರಗಿ: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವುದರಿಂದ ಪಕ್ಷಕ್ಕೆ ಯಾವ ಹಾನಿಯೂ ಆಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಹಲವರು ಬರುತ್ತಾರೆ, ಹೋಗುತ್ತಾರೆ. ಇದರಿಂದ ಪಕ್ಷಕ್ಕೆ ಯಾವುದೇ ರೀತಿಯಲ್ಲಿ ಡ್ಯಾಮೇಜ್ ಆಗುವುದಿಲ್ಲ. ಯಾರೇ ರಾಜೀನಾಮೆ ನೀಡಿದರೂ ಕಾಂಗ್ರೆಸ್ ಗೆ ಡ್ಯಾಮೇಜ್ ಆಗಲ್ಲ. ಇಬ್ರಾಹಿಂ ಪಕ್ಷ ತೊರೆದಿರುವ ವಿಚಾರ ನನಗೆ ಗೊತ್ತಿಲ್ಲ. ಅವನು ಹಿಂದಿನಿಂದಲೂ ನನಗೆ ಒಳ್ಳೆಯ ಸ್ನೇಹಿತ, ಈಗಲೂ ಸ್ನೇಹಿತನೇ ಎಂದು ತಿಳಿಸಿದರು.

Join Whatsapp