Home ಟಾಪ್ ಸುದ್ದಿಗಳು ಸಿದ್ದರಾಮಯ್ಯ ಮುಂದಿನ ಸಿಎಂ: ಮೇ 18ಕ್ಕೆ ಪ್ರಮಾಣ ವಚನ ಎಂದ ನೂತನ ಶಾಸಕ ಕೆಎನ್ ರಾಜಣ್ಣ

ಸಿದ್ದರಾಮಯ್ಯ ಮುಂದಿನ ಸಿಎಂ: ಮೇ 18ಕ್ಕೆ ಪ್ರಮಾಣ ವಚನ ಎಂದ ನೂತನ ಶಾಸಕ ಕೆಎನ್ ರಾಜಣ್ಣ

ತುಮಕೂರು; ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಡಿದ್ದು, ಕಾಂಗ್ರೆಸ್​ ಸಂಪೂರ್ಣ ಬಹುಮತದಿಂದ ಗೆದ್ದು ಬಂದಿದೆ. ಈ ಮಧ್ಯೆ ಸಿಎಂ ಆಯ್ಕೆ ಇನ್ನೂ ಕಗ್ಗಂಟು ಹಿನ್ನೆಲೆ ಮಾತನಾಡಿದ ಮಧುಗಿರಿ ನೂತನ ಶಾಸಕ ಕೆಎನ್ ರಾಜಣ್ಣ ‘ ಕಗ್ಗಂಟು ಇಲ್ಲ, ಯಾವ ಗಂಟು ಇಲ್ಲ, ಎಲ್ಲಾ ಸರಾಗವಾಗಿದೆ. ಇದೇ 18 ಕ್ಕೆ ಪ್ರಮಾಣ ವಚನವಾಗಬಹುದು. ನನಗೆ ವಿಶ್ವಾಸ ಇದೆ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದಿದ್ದಾರೆ‌

ಹೈಕಮಾಂಡ್ ಒಲವು ಕೂಡ ಅವರ ಪರವಾಗಿದೆ. ಎಲ್ಲರನ್ನ ಕರೆಸಿ ವಿಶ್ವಾಸ ತೆಗೆದುಕೊಂಡು ಸಮಾನಕರವಾದ ಘಟ್ಟ ತರಬೇಕೆಂಬ ಪ್ರಯತ್ನ ಅಷ್ಟೇ. ಶಿವಕುಮಾರ್ ಕೂಡ ಸಹಕಾರ ಕೊಡ್ತಾರೆಂಬ ವಿಶ್ವಾಸ ಇದೆ. ಜೊತೆಗೆ ಸಿಎಂ ವಿಚಾರ ಇಂದು(ಮೇ.16) ಪೈನಲ್ ಆಗಲೇಬೇಕು ಎಂದರು.

Join Whatsapp
Exit mobile version