ಆಡಳಿತ ವೈಫಲ್ಯ ಮುಚ್ಚಿ ಜನರ ಗಮನ ಬೇರೆಡೆ ಸೆಳೆಯಲು ‘ಲವ್ ಜಿಹಾದ್’ ಪ್ರಸ್ತಾಪ : ಸಿದ್ದರಾಮಯ್ಯ

Prasthutha|

ಬೆಂಗಳೂರು : ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಜತಾಶ ಪ್ರಯತ್ನವಲ್ಲದೆ ಇನ್ನೇನಲ್ಲ. ಕೋಮು ದ್ವೇಷವನ್ನು ಹುಟ್ಟು ಹಾಕಿ ರಾಜಕೀಯ ಬೇಳೆ ಬೇಯಿಸುವ ದುರುದ್ದೇಶವಲ್ಲದೆ ಬೇರೆ ಯಾವ ಸದುದ್ದೇಶ ಈ ಘೋಷಣೆಯ ಹಿಂದಿಲ್ಲ ಎಂದು ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  

- Advertisement -

ಈ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿರುವ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟವಿಲ್ಲ, ಯಾವ ಕಾನೂನು ಕೂಡ ‘ಲವ್ ಜಿಹಾದ್’ ಅನ್ನು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿಗಳು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಮತಾಂತರ ಎನ್ನುವುದು ಅಂತರ್ ಧರ್ಮೀಯ ಮದುವೆಗೆ ಅಸ್ತ್ರವಾಗಬಾರದು ಎಂದು ತೀರ್ಪು ಹೇಳಿದೆಯೇ ಹೊರತು, ಅಂತರ್ ಧರ್ಮೀಯ ಮದುವೆಯೇ ಅಕ್ರಮ ಎಮದು ಹೇಳಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

- Advertisement -

ಮುಖ್ಯಮಂತ್ರಿಗಳು ಮತ್ತು ಕೆಲವು ಸಚಿವರು ಉತ್ತರ ಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರ ಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.  

Join Whatsapp