Home ಟಾಪ್ ಸುದ್ದಿಗಳು ಕರವೇಯಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ಅಧ್ಯಕ್ಷ ಟಿಎ ನಾರಾಯಣಗೌಡ

ಕರವೇಯಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ಅಧ್ಯಕ್ಷ ಟಿಎ ನಾರಾಯಣಗೌಡ

ಬೆಂಗಳೂರು: ಬೆಂಗಳೂರು ಬಂದ್​ಗೆ ದಿಢೀರ್ ಕರೆ ನೀಡಿರುವುದು ಸರಿಯಲ್ಲ. ಬಂದ್​ಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭಾಗಿಯಾಗಲ್ಲ. ಸೆ.26ರಂದು ಬೆಳಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಕಚೇರಿ, ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

 ಗಾಂಧಿನಗರದಲ್ಲಿರುವ ಕರ್ನಾಟಕ ರಕ್ಷಣೆ ವೇದಿಕೆ ಕಚೇರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕರೆ ನೀಡಿರುವ ಬೆಂಗಳೂರು ಬಂದ್​ಗೆ ಕರವೇ ಬೆಂಬಲವಿಲ್ಲ. ಆದರೆ ನಾಳೆ ಪ್ರತ್ಯೇಕ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವ ತನಕ ಹೋರಾಟ ಮುಂದುವರಿಯುತ್ತೆ. ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೂ ನಮ್ಮ ಬೆಂಬಲವಿಲ್ಲ. ನಾವು ಪ್ರತಿಭಟನೆ ಮಾಡುತ್ತೇವೆಯೇ ಹೊರತು ಬಂದ್​ನಲ್ಲಿ ಭಾಗವಹಿಸಲ್ಲ. ಯಾವುದೇ ಹೋರಾಟಗಾರರ ಬಗ್ಗೆ ನಾನು ಲಘುವಾಗಿ ಮಾತನಾಡಲ್ಲ ಎಂದರು.

Join Whatsapp
Exit mobile version