Home ಕರಾವಳಿ ಕ್ರೈಸ್ತರ ಮೇಲಿನ ದಾಳಿ ಖಂಡಿಸಿ ಸಂತ ಜೋಸೆಫ್ ದೇವಾಲಯದಲ್ಲಿ ಮೌನ ಪ್ರತಿಭಟನೆ

ಕ್ರೈಸ್ತರ ಮೇಲಿನ ದಾಳಿ ಖಂಡಿಸಿ ಸಂತ ಜೋಸೆಫ್ ದೇವಾಲಯದಲ್ಲಿ ಮೌನ ಪ್ರತಿಭಟನೆ

ಮಂಗಳೂರು: ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕ್ರೈಸ್ತರು ಬುಧವಾರ ನೀರು ಮಾರ್ಗ ದಲ್ಲಿರುವ ಸಂತ ಜೋಸೆಫ್  ದೇವಾಲಯದಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಮತ್ತು  ಹಿಂದುಳಿದ ವರ್ಗಗಳ ಕಲ್ಯಾಣ  ಇಲಾಖೆಯು ರಾಜ್ಯದಲ್ಲಿನ ಕ್ರೈಸ್ತ  ಸಮುದಾಯದ ಚರ್ಚುಗಳು ಮತ್ತು ಸಂಘ-ಸಂಸ್ಥೆ ಗಳ ಗಣತಿಯನ್ನು ನಡೆಸಬೇಕೆಂದು ಆದೇಶ ನೀಡಿರುವುದರ ವಿರುದ್ಧ ಮತ್ತು ಇತ್ತೀಚಿನ ದಿನಗಳಲ್ಲಿ ಕ್ರೈಸ್ತರ ಪ್ರಾರ್ಥನಾಲಯಗಳ ಮೇಲೆ ನಡೆಯುವ ದಾಳಿಗಳನ್ನು ವಿರೋಧಿಸಿ ಈ ಮೌನ ಪ್ರತಿಭಟನೆಯನ್ನು ನಡೆಸಲಾಯಿತು.

ಇಡೀ ಮಂಗಳೂರು ಧರ್ಮ ಪ್ರಾಂತ್ಯದ ಎಲ್ಲಾ ಚರ್ಚುಗಳ  ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.

Join Whatsapp
Exit mobile version