ಒಂಟಿ ಮಹಿಳೆಯ ಕತ್ತು ಕೊಯ್ದು ಭೀಕರ ಕೊಲೆ

Prasthutha|

ಮಂಡ್ಯ: ಹಾಡಹಗಲೇ ಒಂಟಿ ಮಹಿಳೆಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ.

- Advertisement -

ಕಿಕ್ಕೇರಿಯ ಒಂಟಿ ಮಹಿಳೆ ಪುಷ್ಪಲತಾ (45) ಮನೆಗೆ ನುಗ್ಗಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಲಾಗಿದೆ.

ಪುಷ್ಪಲತಾ ಅವರ ಪತಿ 10 ವರ್ಷದ ಹಿಂದೆ ಮೃತಪಟ್ಟಿದ್ದು ಒಂಟಿಯಾಗಿಯೇ ತನ್ನ ಮಗನನ್ನು ನೋಡಿಕೊಂಡು ಜೀವನ ನಡೆಸುತ್ತಿದ್ದರು. ಜೀವನ ಸಾಗಿಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ಪುಷ್ಪಲತಾ ನಿನ್ನೆ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದಾಗ ಕೊಲೆ ನಡೆದಿದೆ.

- Advertisement -

ತಾಯಿ ಎಷ್ಟು ಸಮಯವಾದರೂ ಮೆಡಿಕಲ್ ಸ್ಟೋರ್ ಗೆ ಬಾರದ ಹಿನ್ನೆಲೆಯಲ್ಲಿ  ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಪುಷ್ಪಲತಾ ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಅಲ್ಲದೇ ಪುಷ್ಪಲತಾ ಮೃತದೇಹ ಅರ್ಧಂಬರ್ಧ ಬಟ್ಟೆಯಲ್ಲಿ ಪತ್ತೆಯಾಗಿರುವುದರಿಂದ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪುಷ್ಪಲತಾ ಅವರ ಕೊಲೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಶೋಧಕಾರ್ಯವನ್ನು ಪ್ರಾರಂಭಿಸಿದ್ದಾರೆ.

Join Whatsapp