ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ ಎಸ್‌ಐಟಿ

Prasthutha|

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿ ಇಂದು ಮತ್ತೆ ಎಸ್‌ಐಟಿ ಅಧಿಕಾರಿಗಳು ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದಾರೆ.

- Advertisement -

ಸರ್ಚ್ ವಾರೆಂಟ್ ನೋಂದಿಗೆ ಆಗಮಿಸಿರುವಂತ ಎಸ್‌ಐಟಿ ಹತ್ತಾರು ಅಧಿಕಾರಿಗಳ ತಂಡದಿಂದ ಮೂರು ಕಡೆ ಶೋಧಕಾರ್ಯ ನಡೆಸಿದ್ದಾರೆ.

ಹೊಳೆನರಸೀಪುರ ರೇವಣ್ಣ ಮನೆ, ಹಾಸನದ ಎಂ.ಪಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದಲ್ಲದೇ ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲೂ ಎಸ್‌ಐಟಿ ಶೋಧ ನಡೆಸುತ್ತಿದೆ.

- Advertisement -

ಇನ್ಸ್ ಪೆಕ್ಟರ್ ರಾವ್ ಗಣೇಶ್, ಶೋಭಾ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಎಫ್ ಎಸ್ ಎಲ್ ತಂಡದೊಂದಿಗೆ ಎಸ್‌ಐಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.



Join Whatsapp