Home ಟಾಪ್ ಸುದ್ದಿಗಳು ಭೀಕರ ರಸ್ತೆ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು!

ಭೀಕರ ರಸ್ತೆ ಅಪಘಾತ: ಆರು ಮಂದಿ ಸ್ಥಳದಲ್ಲೇ ಸಾವು!

ಅನಂತಪುರ: ಆಟೋವೊಂದಕ್ಕೆ ವೇಗವಾಗಿ ಬಂದ ಟ್ರಕ್‌ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ನಡೆದಿದೆ.

ಶುಕ್ರವಾರ ಬೆಳಗ್ಗೆ ಆಟೋದಲ್ಲಿ ಕೃಷಿ ಕಾರ್ಮಿಕರು ಹೆಚ್ಚಾಗಿ ಮಹಿಳೆಯರೇ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಲಾರಿ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಅನಂತಪುರದ ಪಾಮಿಡಿ ಮಂಡಲ ಸಮೀಪದ ಕೊಪ್ಪಲ್ಲಕೊಂಡ ಗ್ರಾಮದವರು ಎಂದು ತಿಳಿದು ಬಂದಿದೆ.

Join Whatsapp
Exit mobile version