SDPI ಮುಖಂಡನ ಹತ್ಯೆ । ಹದಿನಾರು ಆರೋಪಿಗಳನ್ನು ಪತ್ತೆ ಹಚ್ಚಿದ ಕೇರಳ ಪೊಲೀಸ್

Prasthutha|

ತಿರುವನಂತಪುರಂ: SDPI ರಾಜ್ಯ ಕಾರ್ಯದರ್ಶಿ ಕೆ.ಎಸ್. ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಹದಿನಾರು ಆರೋಪಿಗಳನ್ನು ಗುರುತಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಳಪುಝ ಪೊಲೀಸ್ ವರಿಷ್ಠಾಧಿಕಾರಿ ಜಿ. ಜಯದೇವ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

ಘಟನೆಯ ಪ್ರತಿಕ್ರಿಯಿಸಿದ ಅವರು, ಈ ಹತ್ಯೆ ಹಿಂದಿರುವ ವ್ಯವಸ್ಥಿತ ಪಿತೂರಿಯನ್ನು ಪರಿಶೀಲಿಸಬೇಕಾಗಿದೆ ಮತ್ತು ಇತರ ಪಾಲ್ಗೊಳ್ಳುವಿಕೆಯನ್ನು ಪತ್ತೆ ಹಚ್ಚಬೇಕಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪುರಾವೆ ಮತ್ತು ಹೇಳಿಕೆಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದರು.

ಪ್ರಾಥಮಿಕ ತನಿಖೆಯ ವೇಳೆ ಏಳು ಜನರನ್ನು ಬಂಧಿಸಿರುವುದು ಪೊಲೀಸ್ ಇಲಾಖೆಯ ದೊಡ್ಡ ಸಾಧನೆಯಾಗಿದೆ. ಇನ್ನೂ ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಸಾಂದರ್ಭಿಕವಾಗಿ ತಿಳಿಸಿದರು.

- Advertisement -

ಕೆ.ಎಸ್. ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಶನಿವಾರ ಮತ್ತೆ ಏಳು ಮಂದಿಯನ್ನು ಬಂಧಿಸಿದ್ದರು. ಇದರೊಂದಿಗೆ ಈ ಹತ್ಯೆಯಲ್ಲಿ ಪಾಲ್ಗೊಂಡ 10 ಮಂದಿ ಆರೋಪಿಯನ್ನು ಬಂಧಿಸಲಾಗಿದೆ.

ಕಳೆದ ರಾತ್ರಿ ಶಾನ್ ಅವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಆಗಮಿಸಿದ ತಂಡವೊಂದು ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿತ್ತು. ಈ ದಾಳಿಯ ಹಿಂದೆ ಆರೆಸ್ಸೆಸ್ ಕಾರ್ಯಕರ್ತರ ಕೈವಾಡವಿದೆ ಎಂದು SDPI ಆರೋಪಿಸಿತ್ತು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp