ಜ.11ಕ್ಕೆ SKSSF ಮುನ್ನಡೆ ಯಾತ್ರೆ ದ.ಕ. ಜಿಲ್ಲೆಗೆ | ಪುತ್ತೂರಿನಲ್ಲಿ ಸಮಾರೋಪ

Prasthutha|

ಮಂಗಳೂರು : ಪಾಣಕ್ಕಾಯಿಡ್ ಸಯ್ಯಿದ್ ಹಮೀದಲಿ ಶಿಹಾಬ್ ತಂಙಳ್ ನೇತೃತ್ವದ SKSSF ಮುನ್ನಡೆ ಯಾತ್ರೆಯು ಜ.11ರಂದು ಪುತ್ತೂರಿನಲ್ಲಿ ಸಮಾರೋಪಗೊಳ್ಳಲಿದೆ ಎಂದು ಪತ್ರಿಕಾಗೋಷ್ಠಿಯೊಂದರಲ್ಲಿ SKSSF ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಯಮಾನಿ ಹೇಳಿದ್ದಾರೆ.

- Advertisement -

ಪುತ್ತೂರಿನ ಸಂಪ್ಯದಲ್ಲಿ ಸಂಜೆ 3 ಗಂಟೆಗೆ ನಡೆಯುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು SKSSF ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ವಹಿಸಿಕೊಳ್ಳಲಿದ್ದಾರೆ. ಸಮಸ್ತ ಜಂ-ಇಯ್ಯತುಲ್ ಉಲಮಾದ ಅಧ್ಯಕ್ಷರಾದ ಸಯ್ಯಿದ್ ಜಿಫ್ರಿ ಮತ್ತುಕೋಯ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

‘ಅಸ್ತಿತ್ವ, ಹಕ್ಕು ಯುವ ಜನತೆ ಮರಳಿ ಪಡೆಯುತ್ತಿದೆ’ ಎಂಬ ಧ್ಯೆಯ ವಾಕ್ಯದೊಂದಿಗೆ ಡಿ.6ರಿಂದ ಜ.26ರ ವರೆಗೆ ದೇಶಾದ್ಯಂತ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಭಾಗವಾಗಿ, ಡಿ.30ರಂದು ಕೇರಳದ ತಿರುವನಂತಪುರಂನಿಂದ ಸಯ್ಯದ್ ಹಮೀದಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಇವರ ನೇತೃತ್ವದಲ್ಲಿ ಆರಂಭವಾದ ಮುನ್ನಡೆ ಯಾತ್ರೆಯು ಜ.11ರಂದು ದ.ಕ. ಜಿಲ್ಲೆಯ ಪುತ್ತೂರಿನಲ್ಲಿ ಸಮಾರೋಪಗೊಳ್ಳಲಿದೆ. ಜ.11ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ ತಲಪಾಡಿ ಗಡಿ ಮೂಲಕ ರಾಜ್ಯಕ್ಕೆ ಮುನ್ನಡೆ ಯಾತ್ರೆ ಜಿಲ್ಲಾ ನಾಯಕರು ಬರಮಾಡಿಕೊಂಡು, ಉಳ್ಳಾಲದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

- Advertisement -

SKSSF ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸತ್ತಾರ್ ಪಂದಲ್ಲೂರು ವಿಷಯ ಮಂಡನೆ ಮಾಡಲಿದ್ದಾರೆ. ಖಾಝಿ ತ್ವಾಝಾ ಅಹ್ಮದ್ ಮುಸ್ಲಿಯಾರ್, ಮುಶಾವರ ಸದಸ್ಯರಾದ ಬಿ.ಕೆ. ಅಬ್ದುಲ್ ಖಾದರ್ ಅಲ್ ಖಾಸಿಸಿ ಬಂಬ್ರಾಣ, ಝೈನುಲ್ ಅಬಿದೀನ್ ತಂಙಳ್ ದುಗ್ಗಲಡ್ಕ, ಝೈನುಲ್ ಅಬಿದೀನ್ ಜಿಫ್ರಿ ತಂಙಳ್ ದಾರುಸ್ಸಲಾಂ ಬೆಳ್ತಂಗಡಿ, ಶಾಸಕರಾದ ಯು.ಟಿ. ಖಾದರ್, ಸತ್ತಾರ್ ಪಂದಲ್ಲೂರ್, ರಶೀದ್ ಫೈಝಿ ವೆಳ್ಳಾಯಿಕೋಡು, ತಾಜುದ್ದೀನ್ ದಾರಿಮಿ, ಮಾಜಿ ಸಚಿವ ಬಿ. ರಮಾನಾಥ ರೈ, ಹಿರಿಯ ಚಿಂತಕ ವೈ.ಎಸ್. ದತ್ತ, ಪ್ರಗತಿಪರ ಕೃಷಿಕ ಸಮಾಜದ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ ಮುಂತಾದವರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ SKSSF ಕೇಂದ್ರ ಸಮಿತಿ ಕಾರ್ಯದರ್ಶಿ ಖಾಸಿಂ ದಾರಿಮಿ, ಜಿಲ್ಲಾಧ್ಯಕ್ಷರಾದ ಸಯ್ಯಿದ್ ಅಮೀರ್ ತಂಙಳ್, ಪ್ರಧಾನ ಕಾರ್ಯದರ್ಶಿ ಇಸ್ಲಾಯಿಲ್ ಯಮಾನಿ, ಕಾರ್ಯ ನಿರ್ವಾಹಕ ಕಾರ್ಯದರ್ಶಿ ಆರಿಫ್ ಬಡಕಬೈಲು, ಉಪಾಧ್ಯಕ್ಷ ಸಿದ್ದೀಕ್ ಅಬ್ದುಲ್ ಖಾದರ್ ಮುಂತಾದವರು ಉಪಸ್ಥಿತರಿದ್ದರು.

Join Whatsapp