ಎಸ್‌.ಎಂ. ಕೃಷ್ಣ ಸಹಿತ ಮೂವರಿಗೆ ಮೈಸೂರು ವಿವಿ ಡಾಕ್ಟರೆಟ್‌

Prasthutha|

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಮೈಸೂರಿನ ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿ, ಡಾ. ಎಂ.ಎಸ್‌.ರಾಮಯ್ಯ ಅವರ ಪುತ್ರ, ಮಾಜಿ ಸಚಿವ‌ ಎಂ.ಆರ್‌.ಸೀತಾರಾಂ ಅವರಿಗೆ ಗೌರವ ಡಾಕ್ಟರೆಟ್‌ ಪದವಿ ನೀಡಿ ಗೌರವಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ| ಎನ್‌.ಕೆ.ಲೋಕನಾಥ್‌ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಕಂಡಿರುವ ಮೈಸೂರು ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವ ಮಾ.3ರ ರವಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಡಾ| ಸಿ.ಎನ್‌. ಮಂಜುನಾಥ್‌ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದಿದ್ದಾರೆ.

Join Whatsapp