ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು; 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Prasthutha|

ಕೊಲ್ಕತ್ತಾವಿಷಯುಕ್ತ  ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿರ್ಭೂಮ್‌ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

- Advertisement -

ಬೇಳೆ ತುಂಬಿದ್ದ ಕಂಟೈನರ್‌ ನಲ್ಲಿ ಹಾವು ಕಾಣಿಸಿಕೊಂಡಿದ್ದು,  ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ತಕ್ಷಣವೇ ರಾಂಪುರ್‌ಹತ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದೆವು ಎಂದು ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಗ್ರಾಮದ ಹಲವರು ಜಿಲ್ಲಾ ಪ್ರಾಥಮಿಕ ಶಾಲಾ ನಿರೀಕ್ಷಕರಿಗೆ ಮಾಹಿತಿ ನೀಡಿದ್ದು,  ಮಂಗಳವಾರ  ಅಧಿಕಾರಿಗಳು ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಕ್ಷೇತ್ರ ಅಭಿವೃದ್ಧಿ ಅಧಿಕಾರಿ ದೀಪಾಂಜನ್‌ ಜನಾ ಹೇಳಿದ್ದಾರೆ.

- Advertisement -

ಸದ್ಯ ಒಬ್ಬ ವಿದ್ಯಾರ್ಥಿಯನ್ನು ಹೊರತುಪಡಿಸಿ ಉಳಿದವರೆಲ್ಲ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಗೂ ಯಾವುದೇ ಅಪಾಯವಿಲ್ಲ ಎಂದು ದೀಪಾಂಜನ್‌ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಪೋಷಕರು ಶಾಲೆಯ ಮುಖ್ಯಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Join Whatsapp