ಸಿಎಂರನ್ನೂ ವಿಚಾರಣೆಗೆ ಒಳಪಡಿಸಿ: ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

Prasthutha|

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ.

- Advertisement -


ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಬಂದು ಸ್ನೇಹಮಹಿ ಕೃಷ್ಣ, ಲೋಕಾಯುಕ್ತಕ್ಕೆ ಪತ್ರದ ಮೂಲಕ ಮನವಿ ಸಲ್ಲಿಕೆ ಮಾಡಿದ್ದಾರೆ.


ಅಕ್ಟೋಬರ್ 10ರಂದು ವಾಟ್ಸಪ್ ಮೂಲಕ ಮನವಿ ಮಾಡಿದ್ದ ಸ್ನೇಹಮಯಿ ಕೃಷ್ಣ ಸೋಮವಾರ ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ.

- Advertisement -


ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ಮುಚ್ಚಿಡುತ್ತಿದ್ದಾರೆ. ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿದ್ದಾರೆ.



Join Whatsapp