ಜಮೀರ್ ಮನೆ ಮೇಲೆ ಡಿ.ಕೆ.ಶಿವಕುಮಾರ್ ಅವರೇ ಇ.ಡಿ.ದಾಳಿ ಮಾಡಿಸಿರಬಹುದು: ಎಸ್.ಟಿ.ಸೋಮಶೇಖರ್

Prasthutha|

ಮೈಸೂರು: ಜಮೀರ್ ಅಹಮದ್ ಅವರು ಪದೇ ಪದೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳುತ್ತಿದ್ದರು. ಈ ವಿಚಾರವನ್ನು ಜೀರ್ಣಿಸಿಕೊಳ್ಳಲು ಆಗದೇ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ಮನೆ ಮೇಲೆ ಇಡಿ ದಾಳಿ ಮಾಡಿಸಿರಬಹುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ.

- Advertisement -


ಜಾರಿ ನಿರ್ದೇಶನಾಲಯ (ಇಡಿ) ದಾಳಿಯ ಬಗ್ಗೆ ಡಿ.ಕೆ ಶಿವಕುಮಾರ್ ಅವರಿಗೆ ಸಂಪೂರ್ಣವಾಗಿ ಗೊತ್ತಿದೆ. ಹೀಗಾಗಿ ಶಾಸಕ ಜಮೀರ್ ಅಹಮದ್ ಮನೆ ಮೇಲಿನ ನಡೆದ ದಾಳಿ ಹಿಂದೆ ಡಿ.ಕೆ.ಶಿವಕುಮಾರ್ ಅವರ ಕೈವಾಡ ಏಕೆ ಇರಬಾರದು? ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಸಂಸದ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಇಡಿ ದಾಳಿ ರಾಜಕೀಯ ಪ್ರೇರಿತ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ದಾಳಿಯ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಆರೋಪ ಮಾಡುತ್ತಿರುವವರಿಗೆ ನಾವೂ ಸಹ ಡಿಕೆಶಿ ಮಾಡಿಸಿರಬಹುದು ಎಂದು ಹೇಳಬಹುದಲ್ಲ. ಐ.ಟಿ ಮತ್ತು ಇ.ಡಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ. ನಮ್ಮ ವ್ಯವಹಾರ ಸರಿ ಇದ್ದಾಗ ಹೆದರುವ ಅವಶ್ಯಕತೆ ಏನಿದೆ ಎಂದರು.

- Advertisement -


ನನಗೆ ಯಾವ ಖಾತೆ ನೀಡಿದರೂ ಕೂಡ ನಿಭಾಯಿಸಲು ಸಿದ್ಧನಿದ್ದೇನೆ. ಆದರೆ ಮುಂದಿನ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿ, ಬೆಂಗಳೂರು ಉಸ್ತುವಾರಿ ನೀಡಿದರೆ ಒಳ್ಳೆಯದು. ಆದರೆ ನಾನು ಇದೇ ಖಾತೆ ಬೇಕು ಎಂದು ಕೇಳುವುದಿಲ್ಲ ಎಂದು ಉತ್ತರಿಸಿದರು.

Join Whatsapp