ಬಿಜೆಪಿ‌ಯ ಕೆಲ ನಾಯಕರು ಜೆಡಿಎಸ್ ಏಜೆಂಟರ್‌ಗಳಾಗಿದ್ದಾರೆ: ಎಚ್‌. ವಿಶ್ವನಾಥ್‌

Prasthutha|

ಮೈಸೂರು: ಬಿಜೆಪಿ‌ಯ ಕೆಲ ನಾಯಕರು ಜೆಡಿಎಸ್ ಏಜೆಂಟರ್‌ ಗಳಾಗಿದ್ದಾರೆ ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.

- Advertisement -

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸೋತ ವಿಚಾರವಾಗಿ ಮಾತನಾಡಿದ ಅವರು, ಕೆಲ ಬಿಜೆಪಿ ನಾಯಕರೇ ಅಮಾಯಕ ರಘು ಅವರನ್ನು ಬಲಿ ಕೊಟ್ಟರು. ಬಿಜೆಪಿಯ ಅಭ್ಯರ್ಥಿ ಸೋಲಿಗೆ ಬಿಜೆಪಿಯ ಕೆಲ ನಾಯಕರೇ ಕಾರಣ. ಮೈಸೂರು ಭಾಗದಲ್ಲಿ ಬಿಜೆಪಿ‌ಯ ಕೆಲ ನಾಯಕರು ಜೆಡಿಎಸ್ ಏಜೆಂಟರ್‌ ಗಳಾಗಿದ್ದಾರೆ. ಜೆಡಿಎಸ್‌ ಏಜೆಂಟ್‌ಗಳಾಗಿ ಬಿಜೆಪಿಗೆ ಒಳ ಏಟು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

Join Whatsapp