ಬಿಜೆಪಿ, ಜೆಡಿಎಸ್‍ನ ಕೆಲ ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

Prasthutha|

ಬಾಗಲಕೋಟೆ: ನನ್ನ ಜೊತೆ ಬಿಜೆಪಿ, ಜೆಡಿಎಸ್‍ನ ಕೆಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಹೇಳುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

- Advertisement -

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಜೊತೆ ಬಿಜೆಪಿ, ಜೆಡಿಎಸ್‍ನ ಕೆಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಅವರ ಹೆಸರು ಹೇಳುವುದಿಲ್ಲ ಎಂದಿದ್ದಾರೆ. ಇದೇ ವೇಳೆ ಬಿಜೆಪಿಗೆ ವಲಸೆ ಹೋದವರು ಕಾಂಗ್ರೆಸ್‍ಗೆ ವಾಪಸ್ ಬರುತ್ತಾರಾ ಎಂಬ ಪ್ರಶ್ನೆಗೆ, ನಮಗೆ ಪಕ್ಷಕ್ಕೆ ಸೇರಿಸಿಕೊಳ್ಳಲು ಪಕ್ಷದ ಸಿದ್ದಾಂತದ ಮೇಲೆ ನಂಬಿಕೆ ಇರುವವರು ಬೇಕು. ಅನ್ ಕಂಡೀಷನಲ್ ಆಗಿ ಬರಬೇಕು. ಪಕ್ಷದ ಸಿದ್ದಾಂತ, ನಾಯಕತ್ವ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡು ಬಂದವರಿಗೆ ಸ್ವಾಗತ ಎಂದಿದ್ದಾರೆ.

ಬಾದಾಮಿಯಿಂದಲೇ ಸ್ಪರ್ಧಿಸಿ ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕೆಂಬ ಕನಸು ಕಾಣುತ್ತಿದ್ದಾರೆ ಎಂಬ ಬೆಂಬಲಿಗರ ಒತ್ತಾಯದ ಬಗ್ಗೆ ಮಾತನಾಡಿದ ಅವರು, ಅದಕ್ಕೆ ಇನ್ನು ಒಂದು ಕಾಲು ವರ್ಷವಿದೆ ಅದನ್ನು ಮುಂದೆ ನೋಡೋಣ. ನಾನು ಈಗಲೇ ಅದರ ಬಗ್ಗೆ ಏನೂ ಹೇಳುವುದಕ್ಕೆ ಆಗುವುದಿಲ್ಲ. ಐದಾರು ಕ್ಷೇತ್ರದವರು ನನ್ನನ್ನು ಕರೆಯುತ್ತಿದ್ದಾರೆ. ಅವರನ್ನೆಲ್ಲಾ ಕೇಳಿಕೊಂಡು ಚುನಾವಣೆ ಹತ್ತಿರ ಬಂದಾಗ ಹೇಳುತ್ತೇನೆ ಎಂದು ಹೇಳಿದ್ದಾರೆ.

Join Whatsapp