ಶೀಘ್ರದಲ್ಲೇ ಯತ್ನಾಳ್‌ ಬಿಜೆಪಿಯಿಂದ ಉಚ್ಛಾಟನೆ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

Prasthutha|

ಬೆಳಗಾವಿ : ಬಹಿರಂಗವಾಗಿಯೇ ತಮ್ಮ ಪಕ್ಷದ ನಾಯಕರನ್ನು ಟೀಕಿಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಅವರನ್ನು ಶೀಘ್ರದಲ್ಲೇ ಪಕ್ಷದಿಂದ ಚ್ಛಾಟಿಸಲಾಗುವದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.  

- Advertisement -

ಬಿಜೆಪಿಯಿಂದಲೇ ಶಾಸಕರಾಗಿ ಆಯ್ಕೆಯಾಗಿರುವ ಯತ್ನಾಳ್ ಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಯತ್ನಾಳ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ನಾಯಕರ ವಿರುದ್ದ ತಿರುಗಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ್‌ ಅವರನ್ನು ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಎಂದು ಅರುಣ್ ಸಿಂಗ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು “ಆ ವ್ಯಕ್ತಿಯ ಬಗ್ಗೆ ನಾನು ಮಾತನಾಡುವುದಿಲ್ಲ, ಹೆಚ್ಚು ಮಾತನಾಡಿದರೆ ಅವರಿಗೆ ಹೆಚ್ಚು ಪ್ರಚಾರ ಸಿಗುತ್ತದೆ. ಯತ್ನಾಳ್ ರಿಗೆ ಪಕ್ಷದ ಮೇಲೆ 00.1 ಪರ್ಸೆಂಟ್‌ ಕೂಡ ನಂಬಿಕೆ ಇಲ್ಲವಂತೆ. ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗುವುದು ಎಂದು ಹೇಳಿದರು.

Join Whatsapp