2-3 ವರ್ಷಗಳಲ್ಲಿ ಸಂಪೂರ್ಣ ದಕ್ಷಿಣ ಭಾರತ ಕೇಸರೀಕರಣ : ತೇಜಸ್ವಿ ಸೂರ್ಯ

Prasthutha|

ಹೈದರಾಬಾದ್ : ಇನ್ನು 2-3 ವರ್ಷಗಳಲ್ಲಿ ಸಂಪೂರ್ಣ ದಕ್ಷಿಣ ಭಾರತ ಕೇಸರೀಕರಣಗೊಳಿಸುತ್ತೇವೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿಜಯದ ಮೂಲಕ ಅದು ಆರಂಭವಾಗಲಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

- Advertisement -

ಡಿ.1ರಂದು ನಡೆಯಲಿರುವ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಅವರು ಈ ಮಾತುಗಳನ್ನಾಡಿದ್ದಾರೆ.

ಹೈದರಾಬಾದ್ ಮತ್ತು ತೆಲಂಗಾಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇದು 2-3 ವರ್ಷಗಳಲ್ಲಿ ತಮಿಳುನಾಡು ಮತ್ತು ಕೇರಳದ ವಿಜಯಕ್ಕೆ ಹಾದಿ ಮಾಡಿಕೊಡಲಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp