ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಆಗಸ್ಟ್​ 1ರಿಂದ ವಿಶೇಷ ಕಾರ್ಯಾಚರಣೆ

Prasthutha|

ಬೆಂಗಳೂರು: ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಸೂಸುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ದೀಪ ಅಳವಡಿಸಿಕೊಂಡಿರುವ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈಗ ಮತ್ತೊಂದು ಕಾರ್ಯಾಚರಣೆಗೆ ಪೊಲೀಸ್‌ ಇಲಾಖೆಗೆ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ( ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್​ ಕುಮಾರ್ ಅವರು ಸೂಚಿಸಿದ್ದಾರೆ.

- Advertisement -

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿದೆ. ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್​ಎಸ್​ ಸೆಕ್ಷನ್ 281 ಹಾಗೂ ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ 184ರ ಅಡಿ ಎಫ್​ಐಆರ್​ ದಾಖಲು ಮಾಡಿಕೊಳ್ಳುವಂತೆ ಅವರು ಸೂಚನೆ ನೀಡಿದ್ಧಾರೆ.

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುವುದು ಸಾಮಾನ್ಯವಾಗಿದೆ. ಆಗಸ್ಟ್​ 1ರಿಂದ ವಿಶೇಷ ಕಾರ್ಯಾಚರಣೆ ನಡೆಸಬೇಕು. ಕಾರ್ಯಾಚರಣೆಗೂ ಮೊದಲೇ ಸಾಮಾಜಿಕ ಜಾಲತಾಣ, ಕರಪತ್ರ, ಧ್ವನಿವರ್ಧಕ ಮೂಲಕ ಈ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ಅಲೋಕ್​ ಕುಮಾರ್ ಅವರು ಸೂಚಿಸಿದ್ದಾರೆ.



Join Whatsapp