Home ಕರಾವಳಿ ದ.ಕ ಜಿಲ್ಲೆಯಲ್ಲಿ ಭಾರಿ ಮಳೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಮಿತಿ ನಿಗದಿ

ದ.ಕ ಜಿಲ್ಲೆಯಲ್ಲಿ ಭಾರಿ ಮಳೆ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವೇಗದ ಮಿತಿ ನಿಗದಿ

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯಾಗಿರುವ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಹೊಸದಾಗಿ ವೇಗದ ಮಿತಿ ಹೇರಿದೆ.


ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವಿನ ರಾಷ್ಟ್ರೀಯ ಹೆದ್ದಾರಿ-66 ಮಾರ್ಗದಲ್ಲಿ ಮತ್ತು ಬಿಸಿ ರೋಡ್ ಮತ್ತು ನಂತೂರು ನಡುವಿನ ರಾಷ್ಟ್ರೀಯ ಹೆದ್ದಾರಿ-73 ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಗಂಟೆಗೆ 40 ಕಿಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.


ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.


ಎಲ್ಲಾ ಇತರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ವೇಗವನ್ನು ಗಂಟೆಗೆ 60 ಕಿಮೀಗೆ ಮಿತಿಗೊಳಿಸುವಂತೆ ಪ್ರಾಧಿಕಾರ ವಾಹನ ಸವಾರರಿಗೆ ಸೂಚಿಸಿದೆ.


ಮಂಗಳೂರು ಬೆಂಗಳೂರು ಪ್ರಯಾಣಿಕ ರೈಲುಗಳ ಸಂಚಾರ ರದ್ದತಿ ಮುಂದುವರಿದಿದೆ. 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ರೈಲನ್ನು ಆಗಸ್ಟ್ 6 ಮತ್ತು ಆಗಸ್ಟ್ 7 ರವರೆಗೆ ರದ್ದುಗೊಳಿಸಲಾಗಿದೆ. 16512 ಕಣ್ಣೂರು-ಕೆಎಸ್ಆರ್ ಬೆಂಗಳೂರು ರೈಲನ್ನು ಆಗಸ್ಟ್ 7 ಮತ್ತು ಆಗಸ್ಟ್ 8, 16595 ಕೆಎಸ್ಆರ್ ಬೆಂಗಳೂರು-ಕಾರವಾರ ರೈಲನ್ನು ಆಗಸ್ಟ್ 6 ಮತ್ತು ಆಗಸ್ಟ್ 7 ರವರೆಗೆ, 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಅನ್ನು ಆಗಸ್ಟ್ 7 ಮತ್ತು ಆಗಸ್ಟ್ 8 ರವರೆಗೆ ರದ್ದುಗೊಳಿಸಲಾಗಿದೆ.

Join Whatsapp
Exit mobile version