ಆರ್ಥಿಕ ಬಿಕ್ಕಟ್ಟು ವಿರುದ್ಧದ ಪ್ರತಿಭಟನೆಯನ್ನು‘ಭಯೋತ್ಪಾದಕ ಕೃತ್ಯ’ ಎಂದ ಶ್ರೀಲಂಕಾ ಸರ್ಕಾರ

Prasthutha|

ಕೊಲಂಬೊ: ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಭಾರೀ ಪ್ರತಿಭಟನೆ ನಡೆದಿದೆ. ಆದರೆ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿರುವ ಸರಕಾರ, ಇದೊಂದು ‘ಭಯೋತ್ಪಾದಕ ಕೃತ್ಯ’ ಎಂದು ಟೀಕಿಸಿದೆ. ಪ್ರತಿಭಟನೆಯ ಹಿಂದೆ ಪ್ರತಿಪಕ್ಷಗಳೊಂದಿಗೆ ಸಂಪರ್ಕ ಹೊಂದಿರುವ ‘ಉಗ್ರಗಾಮಿಗಳ’ ಕೈವಾಡ ಇದೆ ಎಂದು ಆರೋಪಿಸಿದೆ.

- Advertisement -

ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಗುರುವಾರ ನಡೆದಿದ್ದ ಪ್ರತಿಭಟನೆಯಲ್ಲಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು, ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲು ಲಾಠಿ ಪ್ರಹಾರ, ಅಶ್ರುವಾಯು ಹಾಗೂ ಜಲಫಿರಂಗಿ ಬಳಸಿದ್ದರು. ಪ್ರತಿಭಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರನ್ನು ಬಂಧಿಸಲಾಗಿತ್ತು.

Join Whatsapp