ಸಚಿವ ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಸಸ್ಪೆಂಡ್!

Prasthutha|

►15 ವರ್ಷಗಳ ಹಿಂದಿನ ಕಾರಣ ಕೊಟ್ಟು ವಜಾ!

- Advertisement -

ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ತನ್ನಲ್ಲಿ ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ಚೆಲುವರಾಜ್ 2005-06 ರಲ್ಲಿ ಮಂಡ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕರ್ತವ್ಯ ಲೋಪ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಮಂಡ್ಯದಲ್ಲಿ ಕರ್ತವ್ಯದಲ್ಲಿದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿದ್ದರು ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ.

- Advertisement -

ಹಣ ಬ್ಯಾಂಕಿಗೆ ಸಂದಾಯವಾದ ಬಳಿಕ ಚಲನ್ ತಿದ್ದಿದ್ದ ಆರೋಪದಡಿ ಚೆಲುವರಾಜ್ ಸೇರಿ 7ಮಂದಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚೆಲುವರಾಜ್ ಸೇರಿ 7 ಜನರನ್ನು ಸೇವೆಯಿಂದ ವಜಾಗೊಳಿಸಿ ಶಿಸ್ತು ಪ್ರಾಧಿಕಾರ ಹಾಗೂ ನೋಂದಣಿ ಪರಿವೀಕ್ಷಕ ಮೋಹನ್ ರಾಜ್ ಆದೇಶಿಸಿದ್ದಾರೆ.

ಕೆಲ ತಿಂಗಳ ಹಿಂದೆ ಸಚಿವ ಆರ್.ಅಶೋಕ್ ಅವರ ಆಪ್ತ ಸಹಾಯಕ ತನ್ನಲ್ಲಿ ಲಂಚ ಕೇಳಿದ್ದರು ಎಂದು ಚೆಲುವರಾಜ್ ಆರೋಪಿಸಿದ್ದರು.

Join Whatsapp