ಮಂಗಳೂರು; ಕುಸಿಯುವ ಭೀತಿಯಲ್ಲಿ ಶ್ರೀನಿವಾಸ ಕಟ್ಟಡ

Prasthutha|

ಮಂಗಳೂರು: ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕುಸಿಯುವ ಭೀತಿ ಎದುರಾಗಿದೆ.
ಜನತಾ ಬಜಾರ್ ಬಳಿಯ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ರೀನಿವಾಸ್ ಎಂಬ ಕಟ್ಟಡದಲ್ಲಿ ಇಂದು ಮಧ್ಯಾಹ್ನದ ಬಳಿಕ ಬಿರುಕು ಕಾಣಿಸಿಕೊಂಡಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದ ಬೀಮ್ ನ ಕಾಂಕ್ರೀಟ್ ತುಂಡುಗಳು ಒಂದೊಂದಾಗಿ ಕೆಳಗೆ ಬೀಳಲು ಪ್ರಾರಂಭಿಸಿದವು.

- Advertisement -

ಕೂಡಲೇ ಕಟ್ಟಡದ ಒಳಗಿದ್ದವರನ್ನು ತೆರವುಗೊಳಿಸಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಸುತ್ತಮುತ್ತಲ ಕಟ್ಟಡಗಳಲ್ಲಿದ್ದವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಕಟ್ಟಡದ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಈ ಕಟ್ಟಡದಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ಸೇರಿದಂತೆ ಇತರ ವಾಣಿಜ್ಯ ಕಚೇರಿಗಳಿವೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಟ್ಟಡದಲ್ಲಿ ಹೆಚ್ಚಿನವರು ಇರಲಿಲ್ಲ ಎಂದು ತಿಳಿದುಬಂದಿದೆ.

Join Whatsapp