ಪಾವಗಡ ಬಸ್ ದುರಂತ | ಖಾಸಗಿ ಬಸ್ ಗಳ ಪರವಾನಿಗೆ ರದ್ದುಗೊಳಿಸಲು ಶ್ರೀರಾಮುಲು ಸೂಚನೆ

Prasthutha|

ಬಳ್ಳಾರಿ: ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ನಡೆದಿತ್ತು. ಈ ಬಗ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಖಾಸಗಿ ಬಸ್ ಗಳ ಪರವಾನಿಗೆ ರದ್ದುಗೊಳಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

- Advertisement -

ಅಪಘಾತದಲ್ಲಿ 8 ಜನ ಮೃತಪಟ್ಟು, 25 ಜನರಿಗೆ ಗಾಯವಾಗಿದೆ. ಪಾವಗಡದಲ್ಲಿ ಖಾಸಗಿ ಬಸ್ ಗಳ ಪರವಾನಗಿ ರದ್ದು ಪಡಿಸಿ, ಸಾರಿಗೆ ಬಸ್ ಓಡಿಸಲು ಕ್ರಮ ಕೈಗೊಳ್ಳುತ್ತೇವೆ. ಆರ್ಟಿಒ ಸಿಬ್ಬಂದಿ ವಿರುದ್ಧ ಕ್ರಮ‌ ಕೈಗೊಂಡು ಅಮಾನತು ಮಾಡುತ್ತೇವೆ. ಮೃತರಿಗೆ ಪರಿಹಾರ ಕೊಡುವ ಕುರಿತು ಸಿಎಂ ಜೊತೆ ಚರ್ಚಿಸಲಿದ್ದೇನೆ ಎಂದು ತಿಳಿಸಿದ್ದಾರೆ.

ಬಸ್ ಅಪಘಾತಕ್ಕೆ ಓವರ್ಲೋಡ್ ಕಾರಣವಾಗಿದೆ ಮತ್ತು ಹೆಚ್ಚಿನ ಪ್ರಯಾಣಿಕರನ್ನು ಬಸ್ನಲ್ಲಿ ಹತ್ತಿಸಿಕೊಂಡಿದ್ದು ಹಾಗೂ ವೇಗವಾಗಿ ಚಾಲನೆ ಮಾಡಿದ್ದು ಅಪಘಾತಕ್ಕೆ ಕಾರಣವಾಗಿದೆ. ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸ್ಥಳಕ್ಕೆ ತೆರಳುತ್ತೇನೆ ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

- Advertisement -

Join Whatsapp