ನಾಗರಿಕ ಹಕ್ಕುಗಳನ್ನು ನಿರಾಕರಿಸಿದ ನ್ಯಾಯಾಲಯ: ಎಸ್ ಎಸ್ ಎಫ್ ಖಂಡನೆ

Prasthutha|

ತಿರುವನಂತಪುರಂ: ಶಿರವಸ್ತ್ರ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಾಗರಿಕ ಹಕ್ಕುಗಳ ನಿರಾಕರಣೆಯಾಗಿದೆ ಎಂದು ಕೇರಳ ರಾಜ್ಯ  ಎಸ್ ಎಸ್ ಎಫ್ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ಶಿರವಸ್ತ್ರ ಧಾರಣೆ ಮುಸ್ಲಿಂ ಧಾರ್ಮಿಕ ಆಚರಣೆಯ ಅತ್ಯಗತ್ಯ ಭಾಗವಲ್ಲ ಎಂಬುವುದು ಅತ್ಯಂತ ವಿಚಿತ್ರ ಸಂಶೋಧನೆಯಾಗಿದೆ ಎಂದು ಎಸ್ ಎಸ್ ಎಫ್ ಹೇಳಿದೆ.

ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಾರದು, ಕಡ್ಡಾಯವಾಗಿ ಸರ್ಕಾರದ ಸಮವಸ್ತ್ರ ಆದೇಶ ಪಾಲನೆ ಮಾಡಬೇಕು ಎಂಬ ಕರ್ನಾಟಕ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ನ ಮೊರೆ ಹೋಗಲು ನಿರ್ಧರಿಸಿದ್ದಾರೆ.



Join Whatsapp