ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ ಸಿಬ್ಬಂದಿ ಅಮಾನತು

Prasthutha|

ಶಿವಮೊಗ್ಗ: ರಾಜ್ಯ ವಿಧಾನಸಭಾ ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಚುನಾವಣಾ ಅಧಿಕಾರಿಗಳು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

- Advertisement -


ಮಾಲತೇಶ್ ಹಾಗೂ ರಮೇಶ್ ಅಮಾನತುಗೊಂಡವರು ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಮಾಲತೇಶ್ ಶಿಕ್ಷಕರಾಗಿದ್ದರು. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು. ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಇಬ್ಬರನ್ನೂ ಅಮಾನತು ಮಾಡಿದ್ದಾರೆ.