ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿಗೆ ಸ್ಟಾಲಿನ್ ಮನವಿ

Prasthutha|

ನವದೆಹಲಿ: ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ಮೋದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಮಾಡಿದ್ದಾರೆ. ಕರ್ನಾಟಕ ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಯೋಜನೆಗೆ ಬ್ರೇಕ್ ಹಾಕುವಂತೆ ಸ್ಟಾಲಿನ್ ಕೋರಿಕೊಂಡಿದ್ದಾರೆ.

- Advertisement -

ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಸ್ಟಾಲಿನ್, ಮೇಕೆದಾಟು ಯೋಜನೆ ಸೇರಿದಂತೆ ಹೊಸ ಯೋಜನೆಗಳಿಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಅನುಮೋದನೆ ನೀಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ಯೋಜನೆಗೆ ಸಮ್ಮತಿ ಸೂಚಿಸಬಾರದು. ಹಾಗು ನಮ್ಮ ಅನುಮತಿಯಿಲ್ಲದೆ ಹೊಸ ಯೋಜನೆ ಕೈಗೊತ್ತಿಕೊಳ್ಳದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Join Whatsapp