ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -


ಅವರು ಇಂದು ಶಿಗ್ಗಾಂವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.


ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಕೇಳಿದ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿ, ಐಎಲ್’ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್’ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿಕೊಳ್ಳುವುದು. ಮಾಸ್ಕ್’ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

- Advertisement -


ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊರೋನಾ ಮುಂಜಾಗ್ರತಾ ಕ್ರಮ :
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾ ದಿಂದ ತೊಡಕುಂಟಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮ್ಮೇಳನ ಬಯಲು ಪ್ರದೇಶದಲ್ಲಿ ಆಗುವುದರಿಂದ, ತೊಂದರೆಯ ಸಾಧ್ಯತೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದರು.

Join Whatsapp