ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಮರಣ

Prasthutha|

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಮರಣಿಸಿದ್ದಾರೆ. ಸಂಜೆ 6:40ರ ಸುಮಾರಿಗೆ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮ ಹೇಳಿವೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -

ಕೆಲವು ದಿನಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಆ ವೇಳೆ ಅಂಬಿಕಾ ಪತಿ ಮನೆಯಲ್ಲಿ 42 ಕೋಟಿ ರೂ. ಹಣ ಪತ್ತೆಯಾಗಿ ಸುದ್ದಿಯಾಗಿತ್ತು. 23 ಬಾಕ್ಸ್ ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಶಪಡಿ ವಿಚಾರಣೆ ನಡೆಸಲಾಗುತ್ತಿತ್ತು. ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Join Whatsapp