PFI ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ: ರಾಜ್ಯ ಸರ್ಕಾರದ ಪರ ವಕೀಲರ ನೇಮಕ

Prasthutha|

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ನ್ಯಾಯಾಧೀಕರಣದ ಮುಂದೆ ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಲು ಪಿ.ಪ್ರಸನ್ನಕುಮಾರ್ ಅವರನ್ನು ವಿಶೇಷ ವಕೀಲರನ್ನಾಗಿ ನೇಮಕ ಮಾಡಿ ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

- Advertisement -


ಈಗಾಗಲೇ ಸಿಬಿಐ, ಇಡಿ ಸೇರಿದಂತೆ ಹಲವು ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಪ್ರಸನ್ನಕುಮಾರ್, ಕರ್ನಾಟಕ ಸರ್ಕಾರದ ಪರ ವಾದ ಮಂಡಿಸುವರು. ಎಎಸ್’ಜಿ ಎಸ್.ವಿ.ರಾಜು ಕೇಂದ್ರ ಸರ್ಕಾರದ ಪರವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp