ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರದಿಂದ 4 ಕೋಟಿ ರೂ. ಅನುದಾನ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ರಾಜ್ಯ ಸರಕಾರ ಒಟ್ಟು ಎಂಟು ಕೋಟಿ ರೂ. ಅನುದಾನ ನಿಗದಿಮಾಡಿ, ನಾಲ್ಕು ಕೋಟಿ ರೂಪಾಯಿಗಳನ್ನು ತಕ್ಷಣಕ್ಕೆ ರೈತರಿಗೆ ವಿತರಿಸಲು ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -


ಈ ಕುರಿತು ಅವರು ಹೇಳಿಕೆ ನೀಡಿದ್ದು, ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಕೊಡಗು, ಹಾಸನ ಜಿಲ್ಲೆಯಲ್ಲಿ ಒಟ್ಟು ಇಪ್ಪತ್ತು ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಹಬ್ಬಿದ್ದು, ಇದರ ನಿಯಂತ್ರಣ ಬಗ್ಗೆ ತೋಟಗಾರಿಕೆ ಇಲಾಖೆ ಔಷಧಿ ಹಾಗೂ ಸಿಂಪರಣೆ ವೆಚ್ಚ ಭರಿಸಲು ಅನುದಾನ ಬಿಡುಗಡೆ ಗೊಳಿಸಿದ್ದು, ರೈತ ಬಾಂಧವರು ಇದರ ಸದುಪಯೋಗ ಪಡೆಯಬೇಕು ಎಂದು ವಿನಂತಿಸಿದ್ದಾರೆ.

ರೋಗ ನಿಯಂತ್ರಣಕ್ಕೆ ಉತ್ತಮ ಗುಣ ಮಟ್ಟದ ಸಸ್ಯ ಸಂರಕ್ಷಣೆ ಔಷಧ ಕೊಳ್ಳಲು ಪ್ರತಿ ಹೆಕ್ಟೇರ್ ಗೆ 4000 ರೂಪಾಯಿ ಅನುದಾನವನ್ನು, ಮೊದಲ ಸಿಂಪರಣೆಗಾಗಿ 1.5 ಹೆಕ್ಟೇರ್ ತೋಟಗಾರಿಕಾ ಪ್ರದೇಶ ಮಿತಿಗೊಳಪಟ್ಟು ರೈತರಿಗೆ ಅನುದಾನ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

- Advertisement -

ಎಲೆ ಚುಕ್ಕೆ ಬಾಧೆ ಕುರಿತು ಕಳೆದ ವಾರ ಗೃಹ ಸಚಿವ ಆರಗ ಜ್ಞಾನೇಂದ್ರ, ತೋಟಗಾರಿಕಾ ಸಚಿವ ಮುನಿರತ್ನ, ಮೀನುಗಾರಿಕೆ ಸಚಿವ ಅಂಗಾರ ಅವರೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಅಗತ್ಯದ ಬಗ್ಗೆ ಚರ್ಚಿಸಿದ್ದರು.

ಸುಮಾರು 20000 ಹೆಕ್ಟೇರ್ ಅಡಿಕೆ ಬೆಲೆ ಪ್ರದೇಶದಲ್ಲಿ ಎಲೆ ಚುಕ್ಕೆ ರೋಗ ಬಾಧಿಸುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ ಹಾಗೂ ರೋಗ ನಿಯಂತ್ರಣಕ್ಕೆ ಒಟ್ಟು ಎಂಟು ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ ಎಂದು ತೋಟಗಾರಿಕಾ ತಜ್ಞರು, ಶಿಫಾರಸು ಮಾಡಿದ್ದಾರೆ.

Join Whatsapp