ಸಾರಿಗೆ ನೌಕರರು 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ರಾಜ್ಯ ಸರಕಾರ

Prasthutha|

ಬೆಂಗಳೂರು: ಕೆಎಸ್ ಆರ್ ಟಿಸಿ (KSRTC) ನೌಕರರು ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

- Advertisement -

ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ಆದೇಶ ಹೊರಡಿಸಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಜ.1ರಿಂದ ಜೂನ್ 30ರವರೆಗೆ ಪ್ರತಿಭಟನೆಗಳನ್ನು ನಡೆಸದಂತೆ ನಿರ್ಬಂಧಿಸಲು ಅಧಿಸೂಚನೆ ಹೊರಡಿಸಲಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂದೆ ಡಿ.19ರಿಂದ  ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.

- Advertisement -

ಮುಷ್ಕರ ಮುಂದುವರಿದರೆ ಚುನಾವಣೆ ಸಮಯದಲ್ಲಿ ಸರ್ಕಾರಕ್ಕೆ ತಲೆನೋವಾಗಬಹುದು ಎಂಬ ಕಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ನೌಕರರು ಹಾಗೂ ನೌಕರರ ವಿವಿಧ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

Join Whatsapp
Exit mobile version