ಗಾಯತ್ರಿ ಸೋಲಿಗೆ ಯಾರು ಕಾರಣವೆಂದು ರಾಜ್ಯಕ್ಕೆ ಗೊತ್ತಿದೆ: ಯಡಿಯೂರಪ್ಪ ವಿರುದ್ಧ ಸಿದ್ದೇಶ್ವರ ಕಿಡಿ

Prasthutha|

ದಾವಣಗೆರೆ: ಪತ್ನಿ ಗಾಯತ್ರಿ ಸೋಲಿಗೆ ಯಾರು ಕಾರಣ ಅಂತ ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪರೋಕ್ಷವಾಗಿ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮಾಜಿ ಸಂಸದ ಜಿಎಂ ಸಿದ್ದೇಶ್ವರ ಕಿಡಿ ಕಾಡಿದ್ದಾರೆ.

- Advertisement -


ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಬಿಜೆಪಿ ಒಡೆದ ಮನೆಯಾಗಿದೆ, ಇದು ಸತ್ಯವಾದ ಮಾತು ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ರಾಜ್ಯ ನಾಯಕರು ಬಂದು ನಾಟಕ ಮಾಡಿ ಹೋದರು. ಎಷ್ಟು ನಾಟಕವಾಡಿದರೂ ಅಂದರೆ ನಮಗೆ ಮಾತನಾಡಲು ಕೂಡ ಬಿಡಲಿಲ್ಲ. ಒಂದು ಕಡೆಯ ಮಾತು ಕೇಳಿ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದರು ಎಂದಿದ್ದಾರೆ. ನನ್ನ ಬರ್ತ್ಡೇಗೆ ಬರಲಿಲ್ಲ, ಮತದಾರರಿಗೆ ಕೃತಜ್ಞತಾ ಸಮಾರಂಭಕ್ಕೂ ಬರಲಿಲ್ಲ. ಕೃತಜ್ಞತಾ ಸಮಾರಂಭಕ್ಕೆ ಯಾರು ಬಂದಿಲ್ವೋ ಅವರೇ ಸೋಲಿಗೆ ಕಾರಣ. ಎಲ್ಲಾ ಸಮಾರಂಭಕ್ಕೂ ನಾವು ಅವರನ್ನು ಆಹ್ವಾನ ಮಾಡಿದ್ದರೂ ಬಂದಿಲ್ಲ. ಎಂಪಿಆರ್ ಮತ್ತು ಟೀಮ್ನಿಂದಲೇ ಸೋಲು ಅನುಭವಿಸಿದ್ವಿ ಎಂದು ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದಾರೆ.



Join Whatsapp
Exit mobile version